ದೇಶದ 60 ಕಡೆ ಎನ್​’ಐಎ ದಾಳಿ: ಕರ್ನಾಟಕ, ತಮಿಳುನಾಡು ಕೇರಳದಲ್ಲಿ ಶೋಧ         

Prasthutha|

ನವದೆಹಲಿ: ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಸ್ಫೋಟ ಹಾಗೂ ತಮಿಳುನಾಡಿನ ಸ್ಫೋಟ ಪ್ರಕರಣದ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ  ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​’ಐಎ) ಅಧಿಕಾರಿಗಳು ಕರ್ನಾಟಕ ಸೇರಿ ಮೂರು ರಾಜ್ಯಗಳ ದಾಳಿ ನಡೆಸಿದ್ದಾರೆ.

- Advertisement -

ಕಳೆದ ವರ್ಷದ ಕೊಯಮುತ್ತೂರು ಹಾಗೂ ಮಂಗಳೂರು ಸ್ಫೋಟ​ ಪ್ರಕರಣಕ್ಕೆ ಸಂಬಂಧ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ 60 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್​’ಐಎ ಅಧಿಕಾರಿಗಳು ದಾಳಿ ಮಾಡಿದ್ದು ಕರ್ನಾಟಕದಲ್ಲಿ 40 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇರಳದ ಪಲ್ಲಕಡನಲ್ಲಿ ದಾಳಿ ನಡೆಸಿ ಎಲೆಕ್ಟ್ರಾನಿಕ್​ ಡಿವೈಸ್​​’ಗಳು​ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.

Join Whatsapp