ಚನ್ನಪಟ್ಟಣದಲ್ಲಿ ಸ್ಪರ್ಧೆ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಲ್ಲ: ನಿಖಿಲ್ ಕುಮಾರಸ್ವಾಮಿ

Prasthutha|

►‘ನಾವು ಬಿಜೆಪಿ ಜೊತೆಗೆ ಕೈಜೋಡಿಸಿದ್ದರೂ ನಮ್ಮ ಸಿದ್ಧಾಂತಗಳನ್ನು ಮರೆತಿಲ್ಲ’

- Advertisement -


ಕೊಪ್ಪಳ : ಚನ್ನಪಟ್ಟಣದಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.


ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಚನ್ನಪಟ್ಟಣ ದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಮಾತನಾಡಿಲ್ಲ. ಆದರೆ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಚನ್ನಪಟ್ಟಣ ಕುಮಾರಸ್ವಾಮಿ ಅವರು ಪ್ರತಿನಿಧಿಸಿದ ಕ್ಷೇತ್ರ, ಅವರೀಗ ದೆಹಲಿಗೆ ಹೋಗಿದ್ದಾರೆ. ನಾನು ನಿರಂತರವಾಗಿ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದು, ಜನರ ಅಭಿಪ್ರಾಯ ಸಂಗ್ರಹ ಮಾಡಿ ಹಿರಿಯರ ಮುಂದೆ ಇಡುತ್ತೇನೆ ಎಂದರು.

- Advertisement -


ಜನತಾದಳ ಅಂದರೆ ಜನತಾ ಪರಿವಾರ ಎನ್ನುವುದು ದೇವೆಗೌಡರ ಕಾಲದಿಂದಲೇ ಬಂದಿರುವ ವಿಚಾರ. ಬಿಜೆಪಿ ಜೊತೆಗೆ ಕೈಜೋಡಿಸಿದ್ದೇವೆ ಎಂದರೆ ನಮ್ಮ ಸಿದ್ಧಾಂತಗಳನ್ನು ಮರೆತಿದ್ದೇವೆ ಅಂತ ಅಲ್ಲ ಎಂದು ಹೇಳಿದ್ದಾರೆ.


ರಾಜ್ಯದಲ್ಲಿ ಬೂತ್ ಸಮಿತಿ ಆಗಬೇಕೆಂದು ರಾಜ್ಯದ ಮೂವತ್ತೊಂದು ಜಿಲ್ಲೆಗಳಲ್ಲೂ ಅಭಿಯಾನ ನಡೆಯುತ್ತಿದೆ. ಬಿಜೆಪಿ- ಜೆಡಿಎಸ್ ಸಂಬಂಧ ನಿರಂತರವಾಗಿ ಇರಬೇಕು ಅನ್ನೋದು ಎಲ್ಲರ ಬಯಕೆಯಾಗಿದೆ. ಜೆಡಿಎಸ್ ರಾಜ್ಯಾದ್ಯಕ್ಷ ಸ್ಥಾನ ಮುಂದಿನ ದಿನದಲ್ಲಿ ಯಾರಿಗೆ ಅನ್ನೋದು ತೀರ್ಮಾನ ವಾಗಲಿದೆ ಎಂದರು.



Join Whatsapp