ತಮಿಳುನಾಡು: ಭಾರಿ ಮಳೆಗೆ ಶಿಥಿಲಗೊಂಡಿದ್ದ ಕಟ್ಟಡ ಕುಸಿದು 9 ಮಂದಿ ಸಾವು

Prasthutha|

ವೆಲ್ಲೂರು: ಭಾರಿ ಮಳೆಗೆ ತತ್ತರಿಸಿರುವ ತಮಿಳುನಾಡಿನಲ್ಲಿ ಕಟ್ಟಡವೊಂದು ಕುಸಿದು ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ.

- Advertisement -

ತಮಿಳುನಾಡಿನ ವೆಲ್ಲೂರ್ ಜಿಲ್ಲೆಯ ಪೆರ್ನಾಂಬಟ್ ಪಟ್ಟಣದಲ್ಲಿ ಘಟನೆ ನಡೆದಿದ್ದು, 16 ಮಂದಿ ವಾಸವಿದ್ದ ಕಟ್ಟಡ ರಾತ್ರಿ ವೇಳೆ ಏಕಾಏಕಿ ಕುಸಿದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಮೃತಪಟ್ಟಿದ್ದು, ಏಳು ಮಂದಿಯನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

https://twitter.com/SpaceAuditi/status/1461606212584173569

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡವು ಶಿಥಿಲಗೊಂಡಿತ್ತು. ಮನೆಗೆ ನೀರು ನುಗ್ಗಿದ ಪರಿಣಾಮ ಪಕ್ಕದ ಮನೆಯವರೂ ಸಹ ಇದೇ.ಹಳೇ ಕಟ್ಟಡದಲ್ಲಿ ಆಶ್ರಯ ಪಡೆದಿದ್ದರು. ರಕ್ಷಣಾ ಕಾರ್ಯಾಚರಣೆಯು ಮುಕ್ತಾಯಗೊಂಡಿದ್ದು 9 ಮಂದಿಯ ಮೃತದೆಹವನ್ನು ಹೊರತೆಗೆಯಲಾಗಿದೆ ಎಂದು ವೆಲ್ಲೂರು ಜಿಲ್ಲಾಧಿಕಾರಿ ಪಿ ಕುಮಾರವೇಲ್ ತಿಳಿಸಿದ್ದಾರೆ.

- Advertisement -

ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತಲಾ 5 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

Join Whatsapp