ಉತ್ತರ ಪ್ರದೇಶ ಚುನಾವಣೆ । ನಿರ್ಭಯಾ ಸಂತ್ರಸ್ತೆ ಪರ ವಕೀಲೆ ಬಿಎಸ್ ಪಿ ಸೇರ್ಪಡೆ

Prasthutha|

ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣಾ ರಂಗ ಕಾವೇರಿದ್ದು, ನಿರ್ಭಯಾ ಮತ್ತು ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯರ ಪರ ವಕೀಲೆ ಸೀಮಾ ಕುಶ್ವಾಹ ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಸೇರ್ಪಡೆಯಾಗಿದ್ದಾರೆ.

- Advertisement -

ಬಿಎಸ್ಪಿ ಅಭ್ಯರ್ಥಿಯಾಗಿ ಸೀಮಾ ಕುಶ್ವಾಹ್ ಕಣಕ್ಕಿಳಿಯಲಿದ್ದಾರೆ ಎಂಬ ಊಹಪೋಹಗಳಿಗೆ ಇದೀಗ ತೆರೆ ಬಿದ್ದಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ನಿರಾಕರಿಸಿದ ಅವರು , ತನಗೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಸಮರ್ಥವಾಗಿ ನಿಭಾಯಿಸುವುದಾಗಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ ಘೋಷಣೆಯಾದ “ಲಡ್ಕಿ ಹೂಂ ಲಡ್ ಸಕ್ತಿ ಹೂಂ” ಎಂಬುವುದರ ಕುರಿತು ವ್ಯಂಗ್ಯವಾಡಿ, ಪ್ರಿಯಾಂಕಾ ಗಾಂಧಿ ಮಹಿಳೆಯರ ಏಕೈಕ ಪ್ರತಿನಿಧಿಯಲ್ಲ ಎಂದು ಛೇಡಿಸಿದ್ದಾರೆ.

Join Whatsapp