ನಿತಿನ್ ಗಡ್ಕರಿ ಉತ್ತಮ ವ್ಯಕ್ತಿ, ಅದರೆ ಅವರಿರುವ ಪಕ್ಷ ಸರಿಯಿಲ್ಲ : ಮಹಾರಾಷ್ಟ್ರ ಸಚಿವ

Prasthutha|

ಔರಾಂಗಾಬಾದ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಒಬ್ಬ ಉತ್ತಮ ವ್ಯಕ್ತಿಯಾಗಿದ್ದು, ಅವರು ಪ್ರತಿನಿಧಿಸುತ್ತಿರುವ ಪಕ್ಷ ಸರಿಯಿಲ್ಲ ಎಂದು ಮಹಾರಾಷ್ಟ್ರದ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚವಾನ್ ಹೇಳಿದ್ದಾರೆ.

- Advertisement -

ನಿತಿನ್ ಗಡ್ಕರಿಯವರು ಉತ್ತಮ ವ್ಯಕ್ತಿಯಾಗಿದ್ದು, ಮಹಾರಾಷ್ಟ್ರದ ಬಗ್ಗೆ ಅವರು ಉತ್ತಮ ಅಭಿಪ್ರಾಯ ಹೊಂದಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚವಾನ್ ಹೇಳಿದ್ದಾರೆ. ಕೇಂದ್ರ ಸರ್ಕಾರವು ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದ್ದು, ದೇಶದಲ್ಲಿ ಸುಮಾರು 12.21 ಕೋಟಿ ಜನರು ಕೆಲಸ ಕಳೆದುಕೊಂಡಿದ್ದಾರೆ. ಜನರಿಗೆ ಉದ್ಯೋಗ ನೀಡುವಲ್ಲಿ ಸರ್ಕಾರ ವಿಫಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದೀಗ ಪೆಟ್ರೋಲ್ ಬೆಲೆ ಲೀಟರ್ ಗೆ ನೂರು ರೂಪಾಯಿಗಿಂತಲೂ ಜಾಸ್ತಿಯಾಗಿದೆ.  ಬಾಂಗ್ಲಾದೇಶದ ಜನರ ಆದಾಯ ಭಾರತಕ್ಕಿಂತ ಉತ್ತಮವಾಗಿದೆ. ಕೇಂದ್ರ ಸರ್ಕಾರ ಮಾಡುತ್ತಿರುವ ನೀತಿ ನಿಯಮಗಳು ದೇಶವನ್ನು ಹಾಳು ಮಾಡುತ್ತಿದೆ ಎಂದು ಅಶೋಕ್ ಚವಾನ್ ಹೇಳಿದರು.

Join Whatsapp