ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ವಿರುದ್ಧ ತಾಳ್ಮೆ ಕಳೆದಕೊಂಡ ನಿತೀಶ್ ಕುಮಾರ್

Prasthutha|

ಪಾಟ್ನಾ: ನಕಲಿ ಮದ್ಯ ಸೇವಿಸಿ ಬಿಹಾರದ ಸರನ್ ಜಿಲ್ಲೆಯ ಛಪ್ರಾ ಪ್ರದೇಶದಲ್ಲಿ ಐವರು ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ  ಬುಧವಾರ ಬಿಹಾರ ವಿಧಾನಸಭೆ ಅಧಿವೇಶನದಲ್ಲಿ ವಾಗ್ವಾದ ಉಂಟಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಾಳ್ಮೆ ಕಳೆದುಕೊಂಡು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಸರನ್ ಜಿಲ್ಲೆಯ ಛಾಪ್ರಾ ಪ್ರದೇಶದಲ್ಲಿ ನಕಲಿ ಮದ್ಯ ಸೇವನೆಯಿಂದ ಹಲವಾರು ಸಾವುಗಳು ಸಂಭವಿಸಿವೆ ಎಂದು ಪ್ರತಿಪಕ್ಷ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಲ್ಲದೆ ಸದನದ ಬಾವಿಗಿಳಿದು ಪ್ರತಿಭಟನೆಯನ್ನು ನಡೆಸಿದರು.

ಇದೇ ವೇಳೆ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಅವರು 2016ರ ಮದ್ಯ ನಿಷೇಧ ನೀತಿ ಕುರಿತು ಪ್ರಶ್ನಿಸುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ನಿತೀಶ್ ಕುಮಾರ್ “ನೀವು ಕುಡಕರು’ ಎಂದು ಬಿಜೆಪಿ ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.

- Advertisement -

ಈ ಘಟನೆಯನ್ನು ಪ್ರತಿಭಟಿಸಿದ ಬಿಹಾರದ ವಿರೋಧ ಪಕ್ಷದ ಶಾಸಕರು ನಂತರ ರಾಜ್ಯ ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದರು.

Join Whatsapp