ಹಿಂದೂಯೇತರರ ವ್ಯಾಪಾರ ನಿರ್ಬಂಧಿಸುವವರ ಮೇಲಿಲ್ಲ ಕ್ರಮ: ಕಾನೂನು ಸಚಿವ!

Prasthutha|

ಬೆಂಗಳೂರು: ರಾಜ್ಯದಲ್ಲಿ ಹಿಂದೂಯೇತರರಿಗೆ ಧಾರ್ಮಿಕ ಕ್ಷೇತ್ರಗಳಲ್ಲಿ ವ್ಯಾಪಾರ ವಹಿವಾಟುಗಳಿಗೆ ನಿರ್ಬಂಧಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕಾನೂನು ಸಚಿವ ಜೆ‌ಸಿ ಮಾಧುಸ್ವಾಮಿ ಸದನದಲ್ಲಿ ತಿಳಿಸಿದ್ದಾರೆ.

- Advertisement -

ಮುಲ್ಕಿ, ಕಾಪು ಸೇರಿ ಹಲವೆಡೆ ಹಿಂದೂ ಜಾತ್ರೆಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿರ್ಬಂಧ ಹಾಕುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಸಿಎಂ ಇಬ್ರಾಹಿಂ ಸಹಿತ ಕಾಂಗ್ರೆಸ್ ಶಾಸಕರು ಸರಕಾರವನ್ನು ಆಗ್ರಹಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ ಸರ್ಕಾರ ರೂಲ್ ಆಫ್ ಲಾ ಮೇಲೆ ನಡೆಯುತ್ತಿದೆ. 2002 ರಲ್ಲಿಯೇ ಕಾಂಗ್ರೆಸ್ ಸರಕಾರ ಈ ನಿಯಮ ಜಾರಿಗೆ ತಂದಿದೆ. ಹಲವೆಡೆ ದೇವಸ್ಥಾನ ಆಡಳಿತ ಮಂಡಳಿಯು ಈ ನಿಯಮ ಉಲ್ಲೇಖಿಸಿ ಹಿಂದೂಯೇತರರಿಗೆ ವ್ಯಾಪಾರ ನಿಷೇಧಿಸಿದೆ.‌ ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದರು.

Join Whatsapp