ಅನಿಲ್ ದೇಶ್ ಮುಖ್ ಪರ ವಕೀಲ, ಎಸ್.ಐ ತಿವಾರಿಗೆ ಜಾಮೀನು ನಿರಾಕರಿಸಿದ ಸಿಬಿಐ ವಿಶೇಷ ನ್ಯಾಯಾಲಯ

Prasthutha|

ಮುಂಬೈ: ಅನಿಲ್ ದೇಶ್ ಮುಖ್ ಪರ ವಕೀಲ ಆನಂದ್ ದಾಗಾ ಮತ್ತು ಸಬ್ ಇನ್ಸ್ ಪೆಕ್ಟರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 8 ರಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ. ಇವರ ವಿರುದ್ಧ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಯ ಸೋರಿಕೆಯ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಬಂಧಿಸಿ 14 ದಿನಗಳ ನ್ಯಾಯಾಂಗ ಒಪ್ಪಿಸಲಾಗಿತ್ತು.

- Advertisement -

ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಮಲ್ ಕುಮಾರ್ ಯಾದವ್ ಅವರು ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಲ್ಲದೆ ಇಬ್ಬರ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಸೆಪ್ಟೆಂಬರ್ 20 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದ್ದಾರೆ.

Join Whatsapp