Home ಕರಾವಳಿ ನಾಳೆ ದ.ಕ. ಜಿಲ್ಲೆ ಬಂದ್ ಗೆ ಕರೆ ಕೊಟ್ಟಿಲ್ಲ: ಹಿಂದುತ್ವ ಸಂಘಟನೆಗಳಿಂದ ಸ್ಪಷ್ಟನೆ

ನಾಳೆ ದ.ಕ. ಜಿಲ್ಲೆ ಬಂದ್ ಗೆ ಕರೆ ಕೊಟ್ಟಿಲ್ಲ: ಹಿಂದುತ್ವ ಸಂಘಟನೆಗಳಿಂದ ಸ್ಪಷ್ಟನೆ

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯನ್ನು ಖಂಡಿಸಿ ದ.ಕ. ಜಿಲ್ಲಾ ಬಂದ್ ಕರೆ ನೀಡಲಾಗಿದೆ ಎನ್ನುವ ಸುದ್ದಿಯೊಂದು ಹರಿದಾಡಲಾರಂಭಿಸಿದೆ. ಆದರೆ, ಇದು ಸುಳ್ಳು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸ್ಪಷ್ಟಪಡಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಗುರುವಾರದಂದು ದ.ಕ. ಜಿಲ್ಲೆ ಬಂದ್ ಗೆ ವಿಹೆಚ್ ಪಿ ಬಜರಂಗ ದಳ ಕರೆ ನೀಡಿದೆ ಎನ್ನುವ ವಿಚಾರವೊಂದು ಹರಿದಾಡುತ್ತಿದೆ. ಜುಲೈ 28ರಂದು ದ.ಕ. ಜಿಲ್ಲೆಯಲ್ಲಿ ಯಾವುದೇ ರೀತಿಯ ಬಂದ್ ಗೆ ಯಾವುದೇ ಹಿಂದೂ ಸಂಘಟನೆಗಳು ಕರೆಕೊಟ್ಟಿಲ್ಲ ಎಂದು ಹಿಹೆಚ್ ಪಿ, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಸ್ಪಷ್ಟಪಡಿಸಿದೆ.

Join Whatsapp
Exit mobile version