ಶಿರೂರು ಗುಡ್ಡ ಕುಸಿತ | ರಕ್ಷಣಾ ತಂಡಗಳಿಂದ ತಾರತಮ್ಯ ನಡೆಯುತ್ತಿಲ್ಲ: ಮಂಜೇಶ್ವರ ಶಾಸಕ ಅಶ್ರಫ್

Prasthutha|

ಕಾರವಾರ: ಅಂಕೋಲ ಬಳಿಯ ಶಿರೂರು ಗುಡ್ಡ ಕುಸಿತ ಪ್ರಕರಣಲ್ಲಿ ಇದುವರೆಗೆ 8 ಮೃತದೇಹಗಳು ದೇಹಗಳು ಪತ್ತೆಯಾಗಿವೆ ಮತ್ತು ಇನ್ನೂ ಮೂವರ ಪತ್ತೆಗೆ ತೀವ್ರ ಶೋಧ ನಡೆಯುತ್ತಿದೆ.

- Advertisement -


ಕೇರಳದ ಲಾರಿ ಚಾಲಕ ಅರ್ಜುನ್ ಇನ್ನು ಪತ್ತೆಯಾಗಿಲ್ಲ. ಸೇನೆಯ ತುಕಡಿ, ಎಸ್ ಡಿ ಅರ್ ಎಫ್, ಎನ್ ಡಿಆರ್ ಎಫ್, ಅಗ್ನಿಶಾಮಕ ದಳ ಮೊದಲಾದ ತಂಡಗಳು ಕಣ್ಮರೆಯಾಗಿರುವವರೆಲ್ಲರ ಹುಡುಕಾಟವನ್ನು ಕಳೆದ 8 ದಿನಗಳಿಂದ ನಡೆಸಿದ್ದರೂ, ಅರ್ಜುನ್ ಕುಟುಂಬದವರು ಅಸಂತೃಪ್ತಿ ವ್ಯಕ್ತಪಡಿಸಿದ್ದಾರೆ.


ಇನ್ನು ಕಾರ್ಯಾಚರಣೆ ಬಗ್ಗೆ ಮಾತನಾಡಿದ ಕೇರಳ ಮಂಜೇಶ್ವರ ಕ್ಷೇತ್ರದ ಶಾಸಕ ಎಕೆಎಮ್ ಅಶ್ರಫ್, ಕಾಣೆಯಾಗಿರುವ ಅರ್ಜುನ್ ಸಹೋದರಿ ಕಾರ್ಯಾಚರಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ನಿಜ, ಅದರೆ ತಾನು ಕಳೆದ 5 ದಿನಗಳಿಂದ ಇಲ್ಲೇ ಇದ್ದು ಕಾರ್ಯಾಚರಣೆ ವೀಕ್ಷಿಸುತ್ತಿದ್ದೇನೆ, ಎಲ್ಲೂ ತಾರತಮ್ಯವಾಗುತ್ತಿಲ್ಲ, ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಬಂದಾಗ ಅವರನ್ನೂ ಭೇಟಿಯಾಗಿದ್ದೇನೆ, ಸ್ಥಳೀಯ ಶಾಸಕ ಸತೀಶ್ ಸೈಲ್ ಅವರ ನೇತೃತ್ವದಲ್ಲಿ ಎಲ್ಲ ಕೆಲಸಗಳು ಲೋಪವಿಲ್ಲದೆ ಜರುಗುತ್ತಿವೆ ಎಂದು ಅಶ್ರಫ್ ಹೇಳಿದರು.



Join Whatsapp