ಮುಖ್ಯಮಂತ್ರಿ ಬದಲಾಗುವ ಕುರಿತು ಚರ್ಚೆಗಳು ನಡೆದಿಲ್ಲ: ಪರಮೇಶ್ವರ್

Prasthutha|

ಬೆಂಗಳೂರು: ಮುಖ್ಯಮಂತ್ರಿ ಬದಲಾಗುವ ಕುರಿತು ಕಾಂಗ್ರೆಸ್ ನ ಯಾವ ನಾಯಕರೂ ಕೂಡ ಹೇಳಿಲ್ಲ. ಆದರೆ ಬಿಜೆಪಿ-ಜೆಡಿಎಸ್ ನಾಯಕರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆ ರೀತಿಯ ಚರ್ಚೆಗಳು ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮುಖ್ಯಮಂತ್ರಿಯವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಬಾರದು. ಈ ಕುರಿತು ದಾಖಲಾಗಿರುವ ದೂರನ್ನು ತಿರಸ್ಕರಿಸಬೇಕು ಮತ್ತು ಶೋಕಾಸ್ ನೋಟಿಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.


ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಸಲಹೆ ನೀಡಿದೆ. ಅದರ ಹೊರತಾಗಿಯೂ ಅವರು ಮುಂದುವರಿದರೆ ನಮಗೂ ಕಾನೂನು ಹೋರಾಟ ಅನಿವಾರ್ಯವಾಗಲಿದೆ. ರಾಜ್ಯಪಾಲರು ಕಾನೂನಿನ ಪ್ರಕಾರ ನಡೆದುಕೊಳ್ಳುವ ನಿರೀಕ್ಷೆಯಿದೆ. ರಾಜ್ಯಪಾಲರು ಕಾನೂನು ಬಿಟ್ಟು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಮಗೆ ಅನಿಸುವುದಿಲ್ಲ ಎಂದು ಹೇಳಿದ್ದಾರೆ.



Join Whatsapp