2024ರಲ್ಲಿ ದ್ವೇಷ ರಾಜಕಾರಣ ಮಾಡುವ ಬಿಜೆಪಿ ಗೆಲ್ಲಲು ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

Prasthutha|

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಲಬೆರಕೆ ಎಂದು ಬಣ್ಣಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಗೆಲ್ಲಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

- Advertisement -

ಇಂದು ಕೋಲ್ಕತ್ತಾದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನೋಟು ಅಮಾನ್ಯೀಕರಣದಂತಹ ಅಪಾಯಕಾರಿ ನಿರ್ಧಾರದ ಮೂಲಕ ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನು ನಾಶ ಪಡಿಸಿದೆ. ಇದು ದೇಶದಲ್ಲೇ ಬೃಹತ್ ಮಟ್ಟದ ಹಗರಣವಾಗಿತ್ತು ಎಂದು ಬ್ಯಾನರ್ಜಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಸದ್ಯ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗೆ ದೇಶದ ಜನರು ಬೇಸತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

- Advertisement -

ಬಿಜೆಪಿ ಭಾರತೀಯರ ಬದುಕಿನೊಂದಿಗೆ ಆಟವಾಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾ

Join Whatsapp