ವಾಹನಗಳಿಗೆ ಹಾನಿ ಮಾಡಿದ್ದಕ್ಕೆ ಸಾಕ್ಷಿಯೇ ಇಲ್ಲ : ಸಿಎಎ ವಿರೋಧಿ ಹೋರಾಟಗಾರರಿಗೆ ಹೈಕೋರ್ಟ್ ಜಾಮೀನು

Prasthutha|

ಮುಂಬೈ : ತಮ್ಮ ಪ್ರತಿಭಟನೆಯ ವೇಳೆ ವಾಹನಗಳಿಗೆ ಹಾನಿ ಮಾಡಿರುವ ಯಾವುದೇ ಸಾಕ್ಷ್ಯವಿಲ್ಲದ ಕಾರಣ ಏಳು ಮಂದಿ ಸಿಎಎ ವಿರೋಧಿ ಹೋರಾಟಗಾರರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

- Advertisement -

ಕೋರ್ಟ್ ವಿಧಿಸಿರುವ ಷರತ್ತುಗಳನ್ನು ಪಾಲಿಸುವುದಾಗಿ ಕೋರ್ಟ್ ಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನಕಾರರಿಗೆ ಜಾಮೀನು ಮಂಜೂರು ಮಾಡಲಾಗಿದೆ.

“ವಾಹನಗಳಿಗೆ ಹಾನಿ ಮಾಡಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ” ಎಂದು ನ್ಯಾ. ಎಂ.ಜಿ. ಸೆವ್ಲಿಕಾರ್ ಹೇಳಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

- Advertisement -

ಅರ್ಜಿದಾರರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಅಗತ್ಯವಿಲ್ಲ. ಹೀಗಾಗಿ ಈ ವಿಷಯದಲ್ಲಿ ನಾನು ಇವರಿಗೆ ನಿರೀಕ್ಷಣಾ ಮಂಜೂರು ನೀಡಲು ಒಲವು ಹೊಂದಿದ್ದೇನೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಡಿ.20ರಂದು ಶಿವಾಜಿ ಪ್ರತಿಮೆ ಮುಂದೆ ಸಭೆ ಸೇರಿದ್ದ ಪ್ರತಿಭಟನಕಾರರು, ರಸ್ತೆ ತಡೆ ಮಾಡಿದ್ದರು. ಈ ವೇಳೆ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತೆರಳಿತ್ತು.

Join Whatsapp