ಜು.8ರಂದು ಶಾಲೆ, ಕಾಲೇಜುಗಳಿಗೆ ರಜೆ ಇಲ್ಲ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

Prasthutha|

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶನಿವಾರದಂದು ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

- Advertisement -

ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಆದರೆ, ಇದೀಗ ಶುಕ್ರವಾರ ಮಳೆ ಇಳಿಕೆಯಾಗಿದ್ದು, ಶನಿವಾರದಂದು ರಜೆ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸೂಕ್ತವಾದ ಮುನ್ನೆಚ್ಚರಿಕೆಯನ್ನು ವಹಿಸಿಕೊಂಡು ಹಾಗೂ ಮುಂಜಾಗರೂಕತೆಯ ಜೊತೆಗೆ ಶಾಲೆ ಕಾಲೇಜುಗಳನ್ನು ನಡೆಸುವಂತೆ ದ.ಕ. ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು, ಅಪಾಯಕಾರಿ ಸನ್ನಿವೇಶವಿದ್ದಲ್ಲಿ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡುವಂತೆಯೂ ಮನವಿ ಮಾಡಿಕೊಳ್ಳಲಾಗಿದೆ.

Join Whatsapp