ಕೆಂಪೇಗೌಡ ಜಯಂತಿಗೆ ದೇವೇಗೌಡ, ಕುಮಾರಸ್ವಾಮಿಗೆ ಆಹ್ವಾನವಿಲ್ಲ: ಒಕ್ಕಲಿಗರ ಸಂಘ ಖಂಡನೆ

Prasthutha|

ಬೆಂಗಳೂರು: ರಾಜ್ಯ ಸರ್ಕಾರ ನಾಳೆ ಆಚರಿಸುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಒಕ್ಕಲಿಗರ ಪ್ರಮುಖ ನಾಯಕರ ಹೆಸರನ್ನು ಕೈಬಿಡಲಾಗಿದೆ ಎಂದು ಒಕ್ಕಲಿಗರ ಸಂಘ ಅಸಮಾಧಾನ ಹೊರಹಾಕಿದೆ.

- Advertisement -

ಸರ್ಕಾರ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆಯುವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ವಿವಿಧ ಪಕ್ಷಗಳ ಶಾಸಕರನ್ನು ಹೆಸರಿಸಲಾಗಿದೆ. ಆದರೆ ರಾಜ್ಯದಲ್ಲಿ ಒಕ್ಕಲಿಗ ಸಮುದಾಯಲ್ಲಿ ಮುಂಚೂಣಿ ನಾಯಕರಾಗಿರುವ ಹೆಚ್​ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರನ್ನು ಆಹ್ವಾನಿಸದಿರುವುದು ಸರಿಯಲ್ಲ. ಇರುವುದು ಒಕ್ಕಲಿಗ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಸರ್ಕಾರದ ಈ ಧೋರಣೆಯನ್ನು ಒಕ್ಕಲಿಗರ ಸಮುದಾಯ ಮತ್ತು ರಾಜ್ಯ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.



Join Whatsapp