Home ಟಾಪ್ ಸುದ್ದಿಗಳು ಕೆಂಪೇಗೌಡ ಜಯಂತಿಗೆ ದೇವೇಗೌಡ, ಕುಮಾರಸ್ವಾಮಿಗೆ ಆಹ್ವಾನವಿಲ್ಲ: ಒಕ್ಕಲಿಗರ ಸಂಘ ಖಂಡನೆ

ಕೆಂಪೇಗೌಡ ಜಯಂತಿಗೆ ದೇವೇಗೌಡ, ಕುಮಾರಸ್ವಾಮಿಗೆ ಆಹ್ವಾನವಿಲ್ಲ: ಒಕ್ಕಲಿಗರ ಸಂಘ ಖಂಡನೆ

ಬೆಂಗಳೂರು: ರಾಜ್ಯ ಸರ್ಕಾರ ನಾಳೆ ಆಚರಿಸುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಒಕ್ಕಲಿಗರ ಪ್ರಮುಖ ನಾಯಕರ ಹೆಸರನ್ನು ಕೈಬಿಡಲಾಗಿದೆ ಎಂದು ಒಕ್ಕಲಿಗರ ಸಂಘ ಅಸಮಾಧಾನ ಹೊರಹಾಕಿದೆ.

ಸರ್ಕಾರ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆಯುವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ವಿವಿಧ ಪಕ್ಷಗಳ ಶಾಸಕರನ್ನು ಹೆಸರಿಸಲಾಗಿದೆ. ಆದರೆ ರಾಜ್ಯದಲ್ಲಿ ಒಕ್ಕಲಿಗ ಸಮುದಾಯಲ್ಲಿ ಮುಂಚೂಣಿ ನಾಯಕರಾಗಿರುವ ಹೆಚ್​ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರನ್ನು ಆಹ್ವಾನಿಸದಿರುವುದು ಸರಿಯಲ್ಲ. ಇರುವುದು ಒಕ್ಕಲಿಗ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಸರ್ಕಾರದ ಈ ಧೋರಣೆಯನ್ನು ಒಕ್ಕಲಿಗರ ಸಮುದಾಯ ಮತ್ತು ರಾಜ್ಯ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.

Join Whatsapp
Exit mobile version