ವಿಜಯೇಂದ್ರ ನನ್ನನ್ನು ಭೇಟಿಯಾಗಿ ನಾಟಕ ಮಾಡುವ ಅಗತ್ಯ ಇಲ್ಲ: ಶಾಸಕ ಯತ್ನಾಳ್‌

Prasthutha|

ವಿಜಯಪುರ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮನ್ನು ಭೇಟಿಯಾಗಿ ನಾಟಕ ಮಾಡುವ ಅಗತ್ಯ ಇಲ್ಲ ಎಂದು ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಹೇಳಿದರು.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಟಾಚಾರಕ್ಕೆ ಬಂದು ಹಾರ ಹಾಕುವುದಾಗಲಿ, ನಾಟಕೀಯವಾಗಿ ಮಾಧ್ಯಮಗಳ ಮುಂದೆ ಪೋಸ್‌ ಕೊಡುವುದಾಗಲಿ ಬೇಡ. ನಾವು ಪಕ್ಷ ನಿಷ್ಠರಿದ್ದೇವೆ, ಲೋಕಸಭೆಯಲ್ಲಿ ಶ್ರಮಿಸುತ್ತೇವೆ. ಮೋದಿ ಗೆಲುವು ನಮಗೆ ಮುಖ್ಯ. ಇದಕ್ಕೆ ದೇವರು-ತಾಯಿ ಸಾಕ್ಷಿ ಎಂದು ತಿಳಿಸಿದರು.

ಮಾಜಿ ಸಚಿವರಾದ ಸುನಿಲ್‌ ಕುಮಾರ್‌, ರಮೇಶ್‌ ಜಾರಕಿಹೊಳಿ, ವಿ.ಸೋಮಣ್ಣ, ಶಾಸಕ ಬೆಲ್ಲದ್ ನಾವೆಲ್ಲ ಒಂದಾಗಿ ಮೋದಿ ಗೆಲುವಿಗೆ ನಿರ್ಧರಿಸಿದ್ದೇವೆ. ಸೋಮಣ್ಣ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬುದು ಸುಳ್ಳು. ಡಿ.6 ರವರೆಗೆ ಹೈಕಮಾಂಡ್ ಸೋಮಣ್ಣರಿಗೆ ಏನಾದರೂ ಹೇಳಬಹುದು ಎಂದರು.

Join Whatsapp