ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು : ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

ಧಾರವಾಡದಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕೆಲವರಿಗೆ ಅಡ್ಡ ಪರಿಣಾಮಗಳು ಆಗಿರುವ ಬಗ್ಗೆ ಮಾಹಿತಿ ಇದೆ. ಲಸಿಕೆ ಎಂದ ಮೇಲೆ ಸಣ್ಣ ಪ್ರಮಾಣದ ಸೈಡ್ ಎಫೆಕ್ಟ್ ಇರುತ್ತೆ. ಆದರೆ ಜನರು ಏನೋ ಆಗಿಬಿಡುತ್ತೆ ಎಂದು ಭಯಪಡಬಾರದು ಎಂದು ಹೇಳಿದರು. ಕರ್ನಾಟಕದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಬರಳಣಿಕೆಯಷ್ಟು ಜನರಿಗೆ ಮಾತ್ರ ಗಂಭೀರ ಆರೋಗ್ಯ ಸಮಸ್ಯೆಗಳು ಕಂಡುಬಂದಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಪರಿಶೀಲನೆ ನಡೆಸಲಾಗಿದೆ ಎಂದರು.

Join Whatsapp