Home ಟಾಪ್ ಸುದ್ದಿಗಳು ಹಿಜಾಬ್ ವಿಚಾರವನ್ನು ಮುಂದೆ ತೆಗೆದುಕೊಂಡು ಹೋಗುವುದು ಬೇಡ: ಬಿ.ಎಸ್.ಯಡಿಯೂರಪ್ಪ

ಹಿಜಾಬ್ ವಿಚಾರವನ್ನು ಮುಂದೆ ತೆಗೆದುಕೊಂಡು ಹೋಗುವುದು ಬೇಡ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಹಿಜಾಬ್ ವಿಚಾರವನ್ನು ಇಲ್ಲಿಗೆ ಮುಗಿಸಿ, ಇದನ್ನು ಇನ್ನು ಮುಂದೆ ತೆಗೆದುಕೊಂಡು ಹೋಗುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಧರ್ಮಕ್ಕಿಂತ ದೊಡ್ಡದು ಎಂದು ಹೈಕೋರ್ಟ್ ನ ಈ ತೀರ್ಪು ಸಾಬೀತುಪಡಿಸಿದೆ. ಸಂವಿಧಾನದ ಮೇಲೆ ನಂಬಿಕೆ ಇರುವವರು, ಎಲ್ಲರೂ ಹೈಕೋರ್ಟ್ ತೀರ್ಪು ಗೌರವಿಸಬೇಕು. ಈ ವಿಚಾರವನ್ನು ಇನ್ನು ಮುಂದೆ ತೆಗೆದುಕೊಂಡು ಹೋಗಬಾರದು. ಎಲ್ಲರೂ ಇದನ್ನು ಗೌರವಿಸಿ, ಸ್ವಾಗತಿಸಬೇಕು ಎಂದು ಯಡಿಯೂರಪ್ಪ ಹೇಳಿದರು.

Join Whatsapp
Exit mobile version