ಮೋದಿ 3ನೇ ಬಾರಿ ಪ್ರಧಾನಿಯಾಗುವುದನ್ನು ಯಾರಿಂದಲೂ ತಡೆಯಲಾಗದು: ಕುಮಾರಸ್ವಾಮಿ

Prasthutha|

ಹಾಸನ: ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗದು ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ – ಜೆಡಿಎಸ್ ಮೈತ್ರಿ ಸೀಟು ಹಂಚಿಕೆಯ ಬಗ್ಗೆ ಸಮಸ್ಯೆ ಇಲ್ಲ. ಹಾಸನ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಸಣ್ಣಪುಟ್ಟ ಸಮಸ್ಯೆಗಳಿವೆ, ಅದೆಲ್ಲವನ್ನೂ ಸರಿಪಡಿಸಿಕೊಳ್ಳುತ್ತೇವೆ. ಮಂಡ್ಯ ಜಿಲ್ಲೆಯ ಪ್ರತಿದಿನ ಒಂದು ಧಾರವಾಹಿ ಇರಲೇಬೇಕು. ನಿಖಿಲ್ ನನ್ನು ರಾಜಕೀಯವಾಗಿ ಮುಗಿಸಲು ಯಾವ ರೀತಿ ಮಾಡಿದ್ದರು? ಒಂದು ತಿಂಗಳಿನಿಂದ ಧಾರವಾಹಿ ನಡೆಯುತ್ತಿದೆ ಎಂದು ಹೇಳಿದರು.


ಹೆಚ್ ಡಿ ರೇವಣ್ಣ ಅವರಿಗೆ ಸ್ವಲ್ಪ ದುಡುಕಿನ ಸ್ವಭಾವ. ಅವರು ದುಡುಕಿನ ಸ್ಚಭಾವದಿಂದ ಜನರ ವಿರೋಧ ಕಟ್ಟಿಕೊಳ್ಳುತ್ತಾರೆ. ಹೆಚ್ ಡಿ ದೇವೇಗೌಡರ ಬೆನ್ನೆಲುಭಾಗಿ ನಿಂತು ರೇವಣ್ಣ ಬೆಳೆದರು. ಅವರದ್ದು ದುಡುಕಿನ ಸ್ವಭಾವ ಆದರೂ ಮಾಡಿರುವ ಕೆಲಸ ಏನೂ ಕಡಿಮೆಯಿಲ್ಲ. ಯಾರದ್ದಾದರೂ ಮನಸ್ಸಿಗೆ ನಮ್ಮಿಂದ ನೋವಾಗಿದ್ದರೆ, ತಪ್ಪಾಗಿದ್ದರೆ ಖಂಡಿತಾ ತಿದ್ದಿಕೊಳ್ಳುತ್ತೇವೆ. ತಪ್ಪುಗಳನ್ನು ಕ್ಷಮಿಸಿ ಬೆಳೆಸುವವರು ನೀವೇ ಎಂದು ಹೇಳಿದ್ದಾರೆ.

Join Whatsapp