ಯಾರೂ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದ್ರೆ ಸಿಎಂಗೆ ಕಳುಹಿಸಿ ಎಂದ ಸಿ.ಟಿ ರವಿ

Prasthutha|

ಬೆಂಗಳೂರು: ಯಾರೂ ಕೂಡ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದ್ರೆ ಮುಖ್ಯಮಂತ್ರಿಗಳಿಗೆ ಕಳುಹಿಸಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನಕ್ಕೆ ಕಾಂಗ್ರೆಸ್ ನವರು ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಇನ್ಯಾವ ಬಣ್ಣ ಬದಲಾಯಿಸ್ತಾರೋ ನೋಡಬೇಕು. ಮೊದಲು ಎಲ್ಲ ಪದವೀಧರ ನಿರುದ್ಯೋಗಿಗಳಿಗೂ 3 ಸಾವಿರ ರೂ. ಕೊಡ್ತೀವಿ ಅಂದಿದ್ರು. ಈಗ 2022-23ರ ಸಾಲಿನ ಪದವೀಧರರಿಗೆ ಮಾತ್ರ ಅಂತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Join Whatsapp