ಹರ್ಷ ಹತ್ಯೆ ಹಿಂದೆ ಯಾವುದೇ ಸಂಘಟನೆ ಕೈವಾಡವಿಲ್ಲ; ಶಿವಮೊಗ್ಗ ಉಸ್ತುವಾರಿ ಸಚಿವ ನಾರಾಯಣ ಗೌಡ

Prasthutha|

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಸಿ ನಾರಾಯಣಗೌಡ ಹೇಳಿಕೆಯೊಂದನ್ನು ನೀಡಿದ್ದಾರೆ. ಹರ್ಷನ ಹತ್ಯೆಯ ಹಿಂದೆ ಯಾವುದೇ ಸಂಘಟನೆಗಳ ಕೈವಾಡವಿಲ್ಲ, ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹರ್ಷನನ್ನು ಕೊಲೆ ಮಾಡಲಾಗಿದೆ ಎಂದ್ದಿದ್ದಾರೆ.

- Advertisement -

ಹರ್ಷ ಕೊಲೆ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಕೊಲೆಯಲ್ಲಿ ಇನ್ನೂ ಇಬ್ಬರು, ಮೂವರು ಭಾಗಿಯಾಗಿರುವ ಶಂಕೆ ಇದೆ. ತನಿಖೆಯ ಆಳಕ್ಕಿಳಿದಿರುವ ಪೊಲೀಸರರು ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.

ಹರ್ಷ ಹತ್ಯೆ ತುಂಬಾ ನೋವಿನ ಸಂಗತಿ, ಇದು ನಡೆಯಬಾರದಿತ್ತು ಎಂದ ಸಚಿವರು ತಾವು ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಿದ್ದು, ಈಗಾಗಲೇ ಮೂವರನ್ನ ಬಂಧಿಸಲಾಗಿದೆ ಇನ್ನೂ ಎರಡು-ಮೂರು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರಬಹುದು ಅವರನ್ನು ಕೂಡ ಶಿಘ್ರದಲ್ಲಿ ಬಂಧನ ಮಾಡುತ್ತೇವೆ ಎಂದು ಅಧಿಕಾರಿಗಳು ತಿಳಿಸಿದರು ಎಂದಿದ್ದಾರೆ.

Join Whatsapp