ಲಕ್ಷದ್ವೀಪದ ನ್ಯಾಯಿಕ ವ್ಯಾಪ್ತಿಯನ್ನು ಕರ್ನಾಟಕ ಹೈಕೋರ್ಟ್ ಗೆ ವರ್ಗಾಯಿಸುವ ಪ್ರಸ್ತಾಪವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Prasthutha|

ನವದೆಹಲಿ, ಜು.28: ಲಕ್ಷ ದ್ವೀಪ ಆಡಳಿತವು ತನ್ನ ನ್ಯಾಯಿಕ ವ್ಯಾಪ್ತಿಯನ್ನು ಕೇರಳ ಹೈಕೋರ್ಟ್ ನಿಂದ ಕರ್ನಾಟಕ ಹೈಕೋರ್ಟ್ ಗೆ ವರ್ಗಾಯಿಸಲು ಕೋರಿ ಯಾವುದೇ ಮನವಿಯನ್ನು ಸಲ್ಲಿಸಿಲ್ಲ ಎಂದು ಲೋಕಸಭೆಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

- Advertisement -

ಸದಸ್ಯರಾದ ಆಂಟನಿ, ರಾಜಮೋಹನ್ ಉನ್ನಿತಾನ್, ಹಿಬಿಎಡನ್ ಅವರು, ಲಕ್ಷ ದ್ವೀಪ ಆಡಳಿತವು ತನ್ನ ನ್ಯಾಯಿಕ ವ್ಯಾಪ್ತಿಯನ್ನು ಕೇರಳ ಹೈಕೋರ್ಟ್ ನಿಂದ ಕರ್ನಾಟಕ ಹೈಕೋರ್ಟ್ ಗೆ ವರ್ಗಾಯಿಸುವ ಪ್ರಸ್ತಾಪ ಸರ್ಕಾರದ ಮುಂದಿದೆಯೇ ಎಂದು ಕೇಳಿದ್ದರು.

ಇದಕ್ಕೆ ಲಿಖಿತ ಉತ್ತರ ನೀಡಿರುವ ಕಿರಣ್ ರಿಜಿಜು, ಲಕ್ಷ ದ್ವೀಪ ಆಡಳಿತವು ತನ್ನ ನ್ಯಾಯಿಕ ವ್ಯಾಪ್ತಿಯನ್ನು ಕೇರಳ ಹೈಕೋರ್ಟ್ ನಿಂದ ಕರ್ನಾಟಕ ಹೈಕೋರ್ಟ್ ಗೆ ವರ್ಗಾಯಿಸುವ ಯಾವುದೇ ಪ್ರಸ್ತಾಪ ಇಲ್ಲ. ಹಾಗಾಗಿ ಈ ಪ್ರಶ್ನೆಗೆ ಉತ್ತರಿಸುವ ಪ್ರಮೇಯವೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.

Join Whatsapp