Home ಟಾಪ್ ಸುದ್ದಿಗಳು ಯಾವುದೇ ಕಾರಣಕ್ಕೂ ಗ್ಯಾರಂಟಿಗಳ ಪರಿಷ್ಕರಣೆ ಆಗಲ್ಲ: ಬಸವರಾಜ ರಾಯರೆಡ್ಡಿ

ಯಾವುದೇ ಕಾರಣಕ್ಕೂ ಗ್ಯಾರಂಟಿಗಳ ಪರಿಷ್ಕರಣೆ ಆಗಲ್ಲ: ಬಸವರಾಜ ರಾಯರೆಡ್ಡಿ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿಗಳ ಪರಿಷ್ಕರಣೆ ಆಗಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸ್ಪಷ್ಟಪಡಿಸಿದ್ದಾರೆ.


ಸಿಎಂ ಜೊತೆ ಅರ್ಥಿಕ ಇಲಾಖೆ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಗ್ಯಾರಂಟಿ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಗ್ಯಾರಂಟಿ ಯೋಜನೆಯಿಂದ ನಮಗೇನು ತೊಂದರೆ ಆಗಿಲ್ಲ. ಹಣಕಾಸಿನ ಒತ್ತಡ ಇದ್ದೇ ಇದೆ ಎಂದು ನಾನು ಹೇಳಿಕೊಂಡು ಬಂದಿದ್ದೇನೆ. ಮುಂದಿನ ವರ್ಷದಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ. ಮುಂದಿನ ವರ್ಷ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ. ದಾಟುತ್ತದೆ. ಹೀಗಾಗಿ ಗ್ಯಾರಂಟಿಗೆ ನಮಗೆ ಸಮಸ್ಯೆ ಆಗಲ್ಲ ಎಂದರು.


ಗ್ಯಾರಂಟಿ ಯೋಜನೆಗಳಲ್ಲಿ ಸರ್ಕಾರಿ ನೌಕರರು ಲಾಭ ಪಡೆಯುತ್ತಿದ್ದಾರೆ. ಅದರ ಬಗ್ಗೆ ಕೆಲವರು ಹೇಳಿದ್ದಾರೆ ಅಷ್ಟೇ. ಆದರೆ ಸಿಎಂ ಗ್ಯಾರಂಟಿ ಪರಿಷ್ಕರಣೆ ಸದ್ಯದ ಪರಿಸ್ಥಿತಿಯಲ್ಲಿ ಮಾಡೋದು ಬೇಡ ಅನ್ನೋ ಮನೋಭಾವನೆಯಲ್ಲಿ ಇದ್ದಾರೆ. ಪರಿಷ್ಕರಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಪರಿಷ್ಕರಣೆ ಮಾಡಲು ಯಾವುದೇ ಕಮಿಟಿ ಆಗಿಲ್ಲ. ಯಾವುದೇ ಸಮಸ್ಯೆ ಇಲ್ಲ. ಗ್ಯಾರಂಟಿ ಬಗ್ಗೆ ವಾರಂಟಿಯನ್ನು ನಾವು ಕೊಡುತ್ತೇವೆ. ಸದ್ಯದ ಪರಿಸ್ಥಿತಿಯಲ್ಲಿ ಪರಿಷ್ಕರಣೆ ಆಗಲ್ಲ. ಪರಿಷ್ಕರಣೆ ಆಗುವ ಅವಶ್ಯಕತೆ ಇಲ್ಲ ಎಂಬುದು ನನ್ನ ಸಲಹೆ ಎಂದು ತಿಳಿಸಿದರು

Join Whatsapp
Exit mobile version