Home ಟಾಪ್ ಸುದ್ದಿಗಳು ಗೋಹತ್ಯೆ ನಿಷೇಧ ಕಾಯ್ದೆಯಿಂದ ಪ್ರಾಣಿ ಸಂಗ್ರಹಾಲಯದಲ್ಲಿ ಆಹಾರದ ಕೊರತೆ ಇಲ್ಲ: ಸಚಿವ ಪ್ರಭು ಚವ್ಹಾಣ್

ಗೋಹತ್ಯೆ ನಿಷೇಧ ಕಾಯ್ದೆಯಿಂದ ಪ್ರಾಣಿ ಸಂಗ್ರಹಾಲಯದಲ್ಲಿ ಆಹಾರದ ಕೊರತೆ ಇಲ್ಲ: ಸಚಿವ ಪ್ರಭು ಚವ್ಹಾಣ್

ವಿಜಯನಗರ:  ಗೋಹತ್ಯೆ ನಿಷೇಧ ಕಾಯ್ದೆಯಿಂದ ಪ್ರಾಣಿ ಸಂಗ್ರಹಾಲಯದಲ್ಲಿ ಆಹಾರದ ಕೊರತೆಯಾಗಿಲ್ಲ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಧಿಕಾರಿಗಳು ಸಭೆ ನಡೆಸಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಲ್ಲಿ ಜಾರಿಯಲ್ಲಿರುವ ವಿವಿಧ ಸೇವಾ ಸೌಲಭ್ಯಗಳ ಕುರಿತು ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಗ್ರಾಮಸಭೆಗಳ ಮೂಲಕ ರೈತರಿಗೆ ಅರಿವು ಮೂಡಿಸುವಂತೆ ಸಚಿವ ಪ್ರಭು ಚವ್ಹಾಣ ಅಧಿಕಾರಿಗಳಿಗೆ  ಸೂಚನೆ ನೀಡಿದರು. 

ಮಾಜಿ ಸಿಎಂ ಯಡಿಯೂರಪ್ಪ ಅವರು ನನಗೆ ಈ ಖಾತೆ ಜವಾಬ್ದಾರಿ ಕೊಟ್ಟಿದ್ದರು. ಗೋವುಗಳ ರಕ್ಷಣೆ ಆಗಬೇಕು, ಗೋಹತ್ಯೆ ಕಾನೂನು ಜಾರಿ ಆಗಬೇಕು ಎನ್ನುವ ಡಿಮ್ಯಾಂಡ್ ಇತ್ತು. ಹೀಗಾಗಿ ನಾನು ಯುಪಿ, ಗುಜರಾತ್ ಹೋಗಿ ಅಧ್ಯಯನ ಮಾಡಿ ಬಂದು ಗೋವುಗಳು ಕಸಾಯಿ ಖಾನೆಗೆ ಹೋಗಬಾರದು ಅಂತ ಈ ಕಾಯ್ದೆ ಜಾರಿ ಮಾಡಲಾಗಿದೆ ಎಂದಿದ್ದಾರೆ.

Join Whatsapp
Exit mobile version