ಬಿಎಂಟಿಸಿ ಖಾಸಗೀಕರಣಗೊಳಿಸುವ ಚಿಂತನೆ ಇಲ್ಲ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Prasthutha|

ಬೆಳಗಾವಿ: ರಾಜಧಾನಿ ಬೆಂಗಳೂರಿನ ಜೀವನಾಡಿ ಬಿಎಂಟಿಸಿ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಪರಿಷತ್ತಿನ ಸಭಾ ನಾಯಕರೂ ಆಗಿರುವ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ ನೀಡಿದರು.

- Advertisement -

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಸದಸ್ಯ ಮುನಿರಾಜು ಗೌಡ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಉತ್ತರಿಸಿದ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣದ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ನುಡಿದರು.
2017-18ನೇ ಸಾಲಿನ ಆಯವ್ಯಯ ಅನ್ವಯ ಆಸಲು ಮತ್ತು ಬಡ್ಡಿ ಸಹಾಯಧನ ಯೋಜನೆಯಡಿಯಲ್ಲಿ ಬಿಎಂಟಿಸಿಗೆ 1500 ಡೀಸೆಲ್ ಬಸ್ ಗಳನ್ನು ಖರೀದಿಸಲು ರಾಜ್ಯ ಸರ್ಕಾರ ಘೋಷಿಸಿದ ಅನುದಾನದಲ್ಲಿ 857 ಬಸ್ಸುಗಳನ್ನು ಖರೀದಿಸಲಾಗುತ್ತಿದೆ ಎಂದರು.

ಅದೇ ರೀತಿ, ಪ್ರಸ್ತುತ 643 ಬಸ್ಸುಗಳನ್ನು ಖರೀದಿಸಲು ಟೆಂಡರ್ ಅನ್ನು ಅಂತಿಮಗೊಳಿಸದ್ದು, ಅನುದಾನ ಲಭ್ಯತೆಗೆ ಅನುಗುಣವಾಗಿ 565 ಹವಾನಿಯಂತ್ರಿತವಲ್ಲದ ಸಾಧರಣ ವಾಹನಗಳನ್ನು ಮಾತ್ರ ಖರೀದಿಸಲಾಗುತ್ತಿದೆ ಎಂದು ಸದನಕ್ಕೆ ತಿಳಿಸಿದರು.

- Advertisement -

ಮತ್ತೊಂದೆಡೆ ಒಟ್ಟು 733 ಕೋಟಿ ಸಾಲ ಪಡೆಯಲಾಗಿದೆ. 195 ಮರು ಪಾವತಿ ಮಾಡಲಾಗಿದೆ ಎಂದ ಅವರು, ಸಾರಿಗೆ ಸಂಸ್ಥೆಗಳ ಹಳೆಯ ಬಸ್ಸು 800 ಲಕ್ಷ ಕಿ.ಮೀ ಅಥವಾ 11 ವರ್ಷದ ಬಳಿಕ ಒಳಗೊಂಡಂತೆ ಯಾವುದು ಮೊದಲೂ ಅದನ್ನು ವಿಲೇವಾರಿ ಮಾಡಲಾಗುವುದೆಂದು ಅವರು ಹೇಳಿದರು.

Join Whatsapp