ಇಂದಿನಿಂದ ಸುರತ್ಕಲ್ ಟೋಲ್’ಗೇಟ್ ನಲ್ಲಿ ಸುಂಕ ವಸೂಲಾತಿ ಇಲ್ಲ: ಹೋರಾಟ ಸಮಿತಿಯಿಂದ ಕೇಕ್ ಕತ್ತರಿಸಿ ಸಂಭ್ರಮಾಚರಣೆ

Prasthutha|

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್’ನಲ್ಲಿ ಡಿಸೆಂಬರ್ 1ರಿಂದ ವಾಹನಗಳಿಂದ ಟೋಲ್ ಸಂಗ್ರಹಿಸುವುದನ್ನು ರದ್ದುಪಡಿಸಿ ದ.ಕ ಜಿಲ್ಲಾಧಿಕಾರಿ ಎಂ. ಆರ್. ರವಿಕುಮಾರ್ ಆದೇಶಿಸಿದ್ದು, ಹೋರಾಟ ಸಮಿತಿಯ ಮುಖಂಡರು ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

- Advertisement -


ಹೋರಾಟ ಸಮಿತಿಯ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆಯ ವೇಳೆ ದ.ಕ. ಜಿಲ್ಲೆಯ ಸಂಸದರು, ಶಾಸಕರಿಗೆ ಧಿಕ್ಕಾರ ಕೂಗಿದರು. ಬಳಿಕ ಟೋಲ್ ಗೇಟ್ ಬಳಿ ಹಾಕಲಾಗಿದ್ದ ಮಂಟಪದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

- Advertisement -


ಎನ್’ಐಟಿಕೆ ಟೋಲ್ ಗೇಟ್ ರದ್ದುಪಡಿಸಿ ಹೆಜಮಾಡಿಯಲ್ಲಿ ಹೆಚ್ಚುವರಿ ಶುಲ್ಕದೊಂದಿಗೆ ಡಿಸೆಂಬರ್ 1ಕ್ಕೆ ಅನ್ವಯವಾಗುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು. ಆದರೂ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ಮುಂದುವರಿದಿತ್ತು. ಈ ಬಗ್ಗೆ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಡಿ. 1ರಿಂದ ಸುರತ್ಕಲ್’ನಲ್ಲಿ ಟೋಲ್ ಸಂಗ್ರಹ ಇರುವುದಿಲ್ಲ ಎಂದು ಅಧಿಕೃತವಾಗಿ ತಿಳಿಸಿದ್ದರು.

Join Whatsapp