Home ಟಾಪ್ ಸುದ್ದಿಗಳು ಸದ್ಯಕ್ಕೆ ಅಧಿಕಾರಿಗಳ ವರ್ಗಾವಣೆ ಇಲ್ಲ: ಸಚಿವರಿಗೆ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಸದ್ಯಕ್ಕೆ ಅಧಿಕಾರಿಗಳ ವರ್ಗಾವಣೆ ಇಲ್ಲ: ಸಚಿವರಿಗೆ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಯಾವುದೆ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಖಡಕ್ ಆಗಿ ಹೇಳಿದ್ದಾರೆ.


ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು.


ಸಚಿವರ ಒತ್ತಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಕಳೆದ ವರ್ಷ ವರ್ಗಾವಣೆ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆಗಳು ಬಂದಿದ್ದು, ಹೀಗಾಗಿ ಈ ವಿಚಾರವನ್ನು ಕೈಗೆತ್ತಿಕೊಳ್ಳದಿರುವುದು ಜಾಣತನ. ಈ ವಿಷಯ ಇಲ್ಲಿಗೆ ಬಿಟ್ಟು ಬಿಡಿ ಎಂದು ಎಚ್ಚರಿಕೆ ನೀಡಿದರು.

Join Whatsapp
Exit mobile version