ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ: ಪ್ರಹ್ಲಾದ್ ಜೋಷಿ

Prasthutha|

ವಾರಾಂತ್ಯ ಕರ್ಫ್ಯೂ ಬಗ್ಗೆ ಬಿಜೆಪಿಯಲ್ಲಿ ತೀವ್ರಗೊಂಡ ಅಸಮಾಧಾನ

- Advertisement -

ಹುಬ್ಬಳ್ಳಿ: ರಾಜ್ಯದಲ್ಲಿ ಆರಂಭಿಸಿರುವಂತಹ ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ನಾನು ಕೇಂದ್ರ ಸಚಿವ ಎಂಬ ನೆಲೆಯಲ್ಲಿ ಈ ಮಾತು ಹೆಳುತ್ತಿಲ್ಲ. ಬದಲಾಗಿ ಇಂತಹ ಸಮಯದಲ್ಲಿ ಇದರ ಯಾವುದೇ ಅಗತ್ಯವಿಲ್ಲ ಎಂದು ಮಾಧ್ಯಮದವರೊಂದಿಗೆ ಮಾತನಾಡಿದರು.

- Advertisement -

ವಾರಾಂತ್ಯ ಕರ್ಫ್ಯೂನಿಂದಾಗಿ ಸಾಕಷ್ಟು ಆರ್ಥಿಕ ಸಮಸ್ಯೆ ಉಂಟಾಗಿದ್ದು, ಆರ್ಥಿಕ ವಹಿವಾಟುಗಳು ಮುಂದುವರಿಯಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾರಾಂತ್ಯ ಕರ್ಫ್ಯೂ ಸಡಿಲಿಕೆ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಈ ವಿಚಾರವಾಗಿ ಬಿಜೆಪಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿತ್ತು. ಮಾಜಿ ಮುಖ್ಯಮಂತ್ರಿ ಈಶ್ವರಪ್ಪ ಕೂಡಾ ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ ಎಂಬ ಹೇಳಿಕೆ ನೀಡಿದ್ದರು.

Join Whatsapp