Home ಟಾಪ್ ಸುದ್ದಿಗಳು ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ: ಪ್ರಹ್ಲಾದ್ ಜೋಷಿ

ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ: ಪ್ರಹ್ಲಾದ್ ಜೋಷಿ

ವಾರಾಂತ್ಯ ಕರ್ಫ್ಯೂ ಬಗ್ಗೆ ಬಿಜೆಪಿಯಲ್ಲಿ ತೀವ್ರಗೊಂಡ ಅಸಮಾಧಾನ

ಹುಬ್ಬಳ್ಳಿ: ರಾಜ್ಯದಲ್ಲಿ ಆರಂಭಿಸಿರುವಂತಹ ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ನಾನು ಕೇಂದ್ರ ಸಚಿವ ಎಂಬ ನೆಲೆಯಲ್ಲಿ ಈ ಮಾತು ಹೆಳುತ್ತಿಲ್ಲ. ಬದಲಾಗಿ ಇಂತಹ ಸಮಯದಲ್ಲಿ ಇದರ ಯಾವುದೇ ಅಗತ್ಯವಿಲ್ಲ ಎಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ವಾರಾಂತ್ಯ ಕರ್ಫ್ಯೂನಿಂದಾಗಿ ಸಾಕಷ್ಟು ಆರ್ಥಿಕ ಸಮಸ್ಯೆ ಉಂಟಾಗಿದ್ದು, ಆರ್ಥಿಕ ವಹಿವಾಟುಗಳು ಮುಂದುವರಿಯಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾರಾಂತ್ಯ ಕರ್ಫ್ಯೂ ಸಡಿಲಿಕೆ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಈ ವಿಚಾರವಾಗಿ ಬಿಜೆಪಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿತ್ತು. ಮಾಜಿ ಮುಖ್ಯಮಂತ್ರಿ ಈಶ್ವರಪ್ಪ ಕೂಡಾ ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ ಎಂಬ ಹೇಳಿಕೆ ನೀಡಿದ್ದರು.

Join Whatsapp
Exit mobile version