ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ನೋಡಲ್ ಅಧಿಕಾರಿ ನೇಮಕ

Prasthutha|

ಬೆಂಗಳೂರು: ಅಫ್ಘಾನಿಸ್ತಾನದಲ್ಲಿ ಉಂಟಾಗಿರುವ ಸಂಘರ್ಷ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.

- Advertisement -


ಕೇಂದ್ರ ಸರ್ಕಾರ ಈಗಾಗಲೇ ಭಾರತೀಯರನ್ನು ಕರೆತರಲು ಕಾರ್ಯಕ್ರಮ ರೂಪಿಸಿದ್ದು, ಇದಕ್ಕೆ ಪೂರಕವಾಗಿ ಕೇಂದ್ರದ ಜೊತೆ ಸಮನ್ವಯದಿಂದ ಕಾರ್ಯ ನಿರ್ವಹಿಸಲು ಸಿಐಡಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.


ಕೇಂದ್ರ ಸರ್ಕಾರದೊಂದಿಗೆ ಸೇರಿ ಕನ್ನಡಿಗರ ಹಿತರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರಿಗೆ ಸೂಚಿಸಲಾಗಿದೆ.

Join Whatsapp