ಯದುವೀರ್ ರಾಜ ವಂಶಸ್ಥರಲ್ಲ: ಕಾಂಗ್ರೆಸ್ ಅಭ್ಯರ್ಥಿ‌ ಲಕ್ಷ್ಮಣ್

Prasthutha|

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರು ಮಹಾರಾಜ ವಂಶಸ್ಥರಲ್ಲ. ಅವರು ಕೇವಲ ಮೈಸೂರು ರಾಜರ ದತ್ತುಪುತ್ರ ಅಷ್ಟೇ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಹೇಳಿದ್ದಾರೆ.

- Advertisement -

ಮಡಿಕೇರಿಯಲ್ಲಿ ನಡೆದ ತಮ್ಮ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರ ಅವರು, ಕಳೆದ ಐದು ವರ್ಷಗಳಲ್ಲಿ ಸಂಸದ ಪ್ರತಾಪ್ ಸಿಂಹ ಏನೂ ಸರಿಯಾಗಿ ಕೆಲಸ ಮಾಡಲಿಲ್ಲ. ಅದನ್ನು ಅವರೇ ತಮಗೆ ಟಿಕೆಟ್ ಕೈತಪ್ಪಿದಾಗ ಹೇಳಿಕೊಂಡರು. ಇನ್ನು ಲೋಕಸಭೆಯಲ್ಲಿ ತಲೆಯ ಲೆಕ್ಕಕ್ಕಾಗಿ ಯದುವೀರ್ ಅವರನ್ನು ಗೆಲ್ಲಿಸಿ ಕಳುಹಿಸಿದರೆ ಎಂತಹ ಅಭಿವೃದ್ಧಿ ಕೆಲಸಗಳು ನಡೆಯಬಹುದು ನೀವೆ ಚಿಂತಿಸಿ ಎಂದಿದ್ದರು. ಹೀಗಾಗಿಯೇ ನನಗೆ ಮತ ನೀಡಿ ಗೆಲ್ಲಿಸಿಕೊಡಿ. ಕೊಡಗು ಹಾಗೂ ಮೈಸೂರು ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಪಕ್ಷವು ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಈಗಾಗಲೇ ಎಐಸಿಸಿ 25 ಗ್ಯಾರಂಟಿಗಳ ಪ್ರಣಾಳಿಕೆಯನ್ನು ಸಿದ್ಧಗೊಳಿಸಿ ಬಿಡುಗಡೆ ಮಾಡಿದೆ ಎಂದು ಹೇಳಿದರು.

Join Whatsapp