ಹೊಸ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸದಿರುವುದೇ ಸನಾತನ ಧರ್ಮದ ಭೇದ: ಉದಯನಿಧಿ

Prasthutha|

ಚೆನ್ನೈ : ನಾನು ಹಿಂದು ಧರ್ಮ ವಿರೋಧಿ ಹೇಳಿಕೆ ನೀಡಿಲ್ಲ. ಸನಾತನ ಧರ್ಮದ ವಿರೋಧಿ. ಇದಕ್ಕೆ ಉದಾಹರಣೆ ಹೊಸ ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆಯದೇ ಇರುವುದು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

- Advertisement -


ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಉದಯನಿಧಿ, ಸನಾತನ ಧರ್ಮ ಜಾತಿ ತಾರತಮ್ಯ ಮಾಡುತ್ತದೆ. ಹೀಗಾಗಿ ನಾನು ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು ಎಂದಿದ್ದೆ. ಅದಕ್ಕೆ ಉದಾಹರಣೆ ನೀಡಬಲ್ಲಿರಾ ಎಂಬ ಪ್ರಶ್ನೆಗೆ, ಹೊಸದಾಗಿ ನಿರ್ಮಿಸಲಾಗಿರುವ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿರಲಿಲ್ಲ. ಇದು ಸನಾತನ ಧರ್ಮದ ಜಾತಿವಾದಕ್ಕೆ ಅತ್ಯುತ್ತಮ ಉದಾಹರಣೆ ಎಂದು ಉತ್ತರಿಸಿದರು.



Join Whatsapp