ಕಾಂಗ್ರೆಸ್ ಮಾತ್ರವಲ್ಲ, ಲಕ್ಷಾಂತರ ಜನರು ಭಾರತ್ ಜೋಡೋ ಯಾತ್ರೆ ಅಗತ್ಯ ಎಂದಿದ್ದಾರೆ: ರಾಹುಲ್​ ಗಾಂಧಿ

Prasthutha|

ಕನ್ಯಾಕುಮಾರಿ: ಕಾಂಗ್ರೆಸ್ ಮಾತ್ರವಲ್ಲ, ಲಕ್ಷಾಂತರ ಜನರು ಭಾರತ್ ಜೋಡೋ ಯಾತ್ರೆ ಅಗತ್ಯ ಎಂದಿದ್ದಾರೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಇಂದು ಮಹತ್ವದ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್​​ ನ ಭಾರತ್ ಜೋಡೋ ಯಾತ್ರೆಯು ಭಾರತದ ಜನರನ್ನು ಧ್ವನಿ ಕೇಳುವ ಗುರಿಯನ್ನು ಹೊಂದಿದೆ. ನಾವು ಜನರ ಧ್ವನಿಯನ್ನು ಹತ್ತಿಕ್ಕಲು ಬಯಸುವುದಿಲ್ಲ ಎಂದರು.

ಕಾಂಗ್ರೆಸ್ ಮಾತ್ರವಲ್ಲ, ಲಕ್ಷಾಂತರ ಜನರು ಇಂದು ಭಾರತ್ ಜೋಡೋ ಯಾತ್ರೆಯ ಅಗತ್ಯವನ್ನು ಮನಗಂಡಿದ್ದಾರೆ. ಭಾರತವನ್ನು ಒಗ್ಗೂಡಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದೂ ಲಕ್ಷಾಂತರ ಜನರು ಭಾವಿಸಿದ್ದಾರೆ ಎಂದು ತಿಳಿಸಿದರು.

Join Whatsapp