ಬೆಂಗಳೂರನ್ನು ಉಳಿಸಿ: ಪ್ರಧಾನಿಗೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಮನವಿ

Prasthutha|

ಬೆಂಗಳೂರು: ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಹೇಳಿಕೊಂಡು, ದಯವಿಟ್ಟು ಬೆಂಗಳೂರನ್ನು ಉಳಿಸಿ ಎಂದು ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ್ದಾರೆ.

- Advertisement -


ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಉದ್ಯಮಿ ಬೆಂಗಳೂರಿನ ಬಗ್ಗೆ ದೂರಿನ ಸರಮಾಲೆಯೇ ಮುಂದಿಟ್ಟಿದ್ದಾರೆ. ಮಳೆಗೆ ಕೆರೆಯಂತಾದ ಬೆಂಗಳೂರಿನಲ್ಲಿ ಅತಿ ಹೆಚ್ಚು ಐಟಿಬಿಟಿ ಕಂಪನಿಗಳು ಇರುವ ಬೆಳ್ಳಂದೂರು, ಮಾರತ್ತಹಳ್ಳಿ, ಔಟರ್ ರಿಂಗ್ ರೋಡ್ ಪ್ರದೇಶಗಳಲ್ಲಿ 2 ದಿನವಾದರೂ ಮಳೆ ನೀರು ತಗ್ಗಿಲ್ಲ. ಐಟಿಬಿಟಿಯಲ್ಲಿ ಕೃತಕ ನದಿಗಳು ಸೃಷ್ಟಿಯಾಗಿವೆ. ರಸ್ತೆಗಳು ಕಿತ್ತುಹೋಗಿದ್ದು, ರಾಜಕಾಲುವೆಯ ಹೂಳೆತ್ತದೇ ಬಿಬಿಎಂಪಿ ನಿರ್ಲಕ್ಷ್ಯವಹಿಸಿದೆ ಎಂದು ಮೋಹನ್ ದಾಸ್ ಪೈ ಹೇಳಿದ್ದಾರೆ.



Join Whatsapp