Home ಟಾಪ್ ಸುದ್ದಿಗಳು ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ತಪ್ಪೇನಿಲ್ಲ: ಕುಮಾರಸ್ವಾಮಿ

ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ತಪ್ಪೇನಿಲ್ಲ: ಕುಮಾರಸ್ವಾಮಿ

ಶಿವಮೊಗ್ಗ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.


ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರ ಪರ ಯಾರು ಬೇಕಾದರೂ ಪ್ರಚಾರ ಮಾಡಬಹುದು. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವಂತಹದ್ದು ಏನೂ ಇಲ್ಲ ಎಂದು ಹೇಳಿದರು. ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಲಿದೆ. ಬಿಜೆಪಿಯಲ್ಲಿ ಭಿನ್ನಮತದ ವಿಚಾರವನ್ನು ಆ ಪಕ್ಷದ ಹೈಕಮಾಂಡ್ ಬಗೆಹರಿಸುತ್ತಿದೆ ಎಂದು ಹೇಳಿದರು.

Join Whatsapp
Exit mobile version