ರಾಜ್ಯದಲ್ಲಿ ಕಳೆದ ಬಾರಿ ಹಿಂದುತ್ವದ ಸರ್ಕಾರ ಇತ್ತು, ಈಗ ಸಂವಿಧಾನದ ಸರ್ಕಾರ ಇದೆ: ಪ್ರಿಯಾಂಕ್ ಖರ್ಗೆ

Prasthutha|

ಹುಬ್ಬಳ್ಳಿ: ರಾಜ್ಯದಲ್ಲಿ ಕಳೆದ ಬಾರಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -

ಈ ಬಗ್ಗೆ ಮಾತನಾಡಿದ ಅವರು, ದೇಶ ನಡಿತಿರೋದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ, ಬೈಬಲ್ ಮೇಲೆಯೂ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಎನ್ನಲು, ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ. ಸರ್ಕಾರಗಳು ನಡೆಯೋದು ಸಂವಿಧಾನದ ಮೇಲೆ ಎಂದು ತಿಳಿಸಿದರು ಬಸವ ತತ್ವ, ಅಂಬೇಡ್ಕರ್ ತತ್ವದ ಮೇಲೆ ಸರ್ಕಾರ ನಡೀತಿದೆ. ಹಿಂದಿನ ಸರ್ಕಾರ ಹಿಂದುತ್ವದ ಮೇಲೆ ನಡೀತಿತ್ತು. ಪೀಠದ ಮೇಲೆ ಕುಳಿತು ಕಾಗೇರಿ ನಾನು ಆರ್‌ ಎಸ್‌ ಎಸ್‌ ನವರು ಎಂದಿದ್ದರು. ಬಿಜೆಪಿಯವರು ಹಣದ ಮೇಲೆ ಹೆಣ ಮಾಡಿದ್ದಾರೆ ಎಂದು ಹೇಳಿದ್ದಾರೆ.



Join Whatsapp