NSUI ಯಿಂದ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ

Prasthutha|

- Advertisement -

ಜೈಪುರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸುವ ಅಭಿಯಾನವನ್ನು ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ನ್ಯಾಷನಲ್ ಸ್ಟುಡೆಂಟ್ ಯೂನಿಯನ್ ಆಫ್ ಇಂಡಿಯಾ ಪ್ರಾರಂಭಿಸಿದೆ. ಜೈಪುರದ ಜವಾಹರಲಾಲ್ ನೆಹರು ರಸ್ತೆಯಲ್ಲಿರುವ ವಾಣಿಜ್ಯ ಕಾಲೇಜಿನಲ್ಲಿ NSUI ರಾಜ್ಯಾಧ್ಯಕ್ಷ ಅಭಿಷೇಕ್ ಚೌಧರಿ ‘ರಾಮನ ಹೆಸರಿನಲ್ಲಿ ಒಂದು ರೂಪಾಯಿ’ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ವಿದ್ಯಾರ್ಥಿ ಸಂಘಟನೆಯ ಸುಮಾರು 100 ಸದಸ್ಯರು ಮೊದಲ ದಿನ ಕಾಲೇಜು ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹಿಸಿದ್ದಾರೆ. 15 ದಿನಗಳ ಅಭಿಯಾನವು ರಾಜ್ಯದ ಎಲ್ಲಾ ಕಾಲೇಜುಗಳನ್ನು ಒಳಗೊಳ್ಳಲಿದೆ. ಈ ಅಭಿಯಾನದಲ್ಲಿ ಸಂಗ್ರಹಿಸಿದ ಹಣವನ್ನು ಅಯೋಧ್ಯೆಯ ರಾಮ ಮಂದಿರದ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದೇವೆ ಎಂದು NSUI ವಕ್ತಾರ ರಮೇಶ್ ಭತಿ ತಿಳಿಸಿದ್ದಾರೆ.

Join Whatsapp