UGC ಸುತ್ತೋಲೆ ಅನುಷ್ಠಾನಗೊಳಿಸದಂತೆ ಶಿಕ್ಷಣ ಸಚಿವರಿಗೆ NSUI ಮನವಿ

Prasthutha|

ಮಂಗಳೂರು: ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ವಿವಾದಾತ್ಮಕ ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆಯಲ್ಲಿರುವ ಲಿಂಕ್‌ನಲ್ಲಿ ಪ್ರಧಾನಿ‌ ನರೇಂದ್ರ ಮೋದಿಯವರ ಚಿತ್ರವಿರುವ ಸೆಲ್ಫಿ ಪಾಯಿಂಟ್‌ಗಳನ್ನು ಕಾಲೇಜುಗಳಲ್ಲಿ ಪ್ರದರ್ಶಿಸಲು ಸೂಚಿಸಿದೆ. ಆದರೆ ಇದನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಬಾರದು ಎಂದು NSUI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಮನವಿ ಸ್ವೀಕರಿಸಿದ ಸಚಿವರು ಈ ಸಂಬಂಧವಾಗಿ ಸದನದಲ್ಲಿ ಮಾತನಾಡುವ ಭರವಸೆ ನೀಡಿದ್ದಾರೆ.

ಅನ್ಸಾರ್ ಸಾಲ್ಮರ, ಸಫ್ವಾನ್ ಹಾಗೂ ಮನೋಹರ್ ಉಪಸ್ಥಿತರಿದ್ದರು.

Join Whatsapp