ಆರೆಸ್ಸೆಸ್ ಚಡ್ಡಿ ಸುಟ್ಟ NSUI ಕಾರ್ಯಕರ್ತರಿಗೆ ಜಾಮೀನು

Prasthutha|

ತುಮಕೂರು: ಪಠ್ಯಪರಿಷ್ಕರಣೆಯಲ್ಲಿ ಸಮಾಜ ಸುಧಾರಕರ ಪಾಠವನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿವಾಸದ ಎದುರು ಆರೆಸ್ಸೆಸ್ ಚೆಡ್ಡಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಕಾರಣಕ್ಕೆ ಜೈಲುಪಾಲಾಗಿದ್ದ ಎನ್ ಎಸ್ ಯುಐ ಕಾರ್ಯಕರ್ತರಿಗೆ ತುಮಕೂರು ಸ್ಥಳೀಯ ನ್ಯಾಯಾಲಯವೊಂದು ಜಾಮೀನು ನೀಡಿದೆ.

- Advertisement -

ಜೂನ್.1 ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಯ ಎದುರು ಎನ್ ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಕಿಡಿಕಾರಿದ್ದರು. ಅಲ್ಲದೇ ಆರ್ ಎಸ್ ಎಸ್ ಚಡ್ಡಿಯನ್ನು ಸುಟ್ಟು ಹಾಕಿದ್ದರು.

ಪ್ರಕರಣ ಸಂಬಂಧ ತುಮಕೂರಿನ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಎನ್ ಎಸ್ ಯು ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 24 ಜನರಿಗೆ ಜಾಮೀನು ಮಂಜೂರು ಮಾಡಿದೆ. ನಾಳೆ ತುಮಕೂರಿನ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.

Join Whatsapp