ಮತಾಂತರ ನೆಪದಲ್ಲಿ ಕ್ರೈಸ್ತ ಸನ್ಯಾಸಿನಿಯರ ಮೇಲೆ ಹಲ್ಲೆ| ಹಿಂದೂ ಯುವ ವಾಹಿನಿ ಕಾರ್ಯಕರ್ತರ ವಿರುದ್ಧ ದೂರು

Prasthutha|

ಲಕ್ನೋ: ಉತ್ತರ ಪ್ರದೇಶದಲ್ಲಿ ಹಿಂದುತ್ವವಾದಿಗಳು ಮತಾಂತರ ನೆಪದಲ್ಲಿ ಮತ್ತೆ ಕ್ರೈಸ್ತ ಸನ್ಯಾಸಿನಿಯರ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿದೆ.

- Advertisement -

ಕ್ಯಾಥೊಲಿಕ್ ಮಿಷನ್ ಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಗ್ರೇಸಿ ಮೊಂತೇರೊ ಮತ್ತು ಸಿಸ್ಟರ್ ರೋಶ್ನಿ ಮಿಂಜು ಮೇಲೆ ಹಲ್ಲೆ ನಡೆಸಲಾಗಿತ್ತು. ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಯುವ ವಾಹಿನಿ ಕಾರ್ಯಕರ್ತರು ಅವರನ್ನು ತಡೆದು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಉನ್ನತ ಅಧಿಕಾರಿಗಳು ಮಧ್ಯಪ್ರವೇಶಿಸಿದ ನಂತರ ಕ್ರೈಸ್ತ ಸನ್ಯಾಸಿನಿಯರನ್ನು ಬಿಡುಗಡೆ ಮಾಡಲಾಗಿತ್ತು. ಸನ್ಯಾಸಿನಿಯರು ದೂರು ನೀಡಿದ್ದರೂ ಮೊದಲು ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಎಂದು ತಿಳಿದುಬಂದಿದೆ.

Join Whatsapp