Home ಟಾಪ್ ಸುದ್ದಿಗಳು ಪ್ರವಾದಿ ಅವಹೇಳಿಸಿದ ನೂಪುರ್ ಶರ್ಮಾಗೆ ಸಮನ್ಸ್ ಜಾರಿ

ಪ್ರವಾದಿ ಅವಹೇಳಿಸಿದ ನೂಪುರ್ ಶರ್ಮಾಗೆ ಸಮನ್ಸ್ ಜಾರಿ

ಮುಂಬೈ: ಪ್ರವಾದಿ ಪೈಂಗಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ. ಜೂನ್ 25ರಂದು ನೂಪುರ್ ಶರ್ಮಾ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಇದೀಗಾಗಲೇ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ ಖಂಡಿಸಿ ಮುಸ್ಲಿಂ ಸಂಘಟನೆಗಳು, ವಿದ್ವಾಂಸರು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ನೂಪುರ್ ಶರ್ಮಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

ದೇಶದಲ್ಲಿ ಶಾಂತಿ ಸೌಹಾರ್ದತೆಯನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ಹಾಳು ಮಾಡುತ್ತಿದ್ದು, ಕಾನೂನು ಪ್ರಕಾರವಾಗಿ ನೂಪುರ್ ಶರ್ಮಾ ಬಂಧನವಾಗಬೇಕು. ಆದರೆ ಆಕೆಯನ್ನು ಪೊಲೀಸರು ಏಕೆ ಬಂಧಿಸುತ್ತಿಲ್ಲ ಎಂದು ಕಳೆದ ಶನಿವಾರ ಸಂಸದ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದರು.

Join Whatsapp
Exit mobile version