ಒಡಿಶಾ ರೈಲು ದುರಂತ ಪ್ರಕರಣ: ಮೂವರು ರೈಲ್ವೆ ಅಧಿಕಾರಿಗಳ ಬಂಧನ

Prasthutha|

ಹೊಸದಿಲ್ಲಿ: ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಅಧಿಕಾರಿಗಳನ್ನು ಸಿಬಿಐ ಬಂಧಿಸಿರುವುದಾಗಿ ವರದಿಯಾಗಿದೆ.

- Advertisement -

ಬಂಧಿತರನ್ನು ರೈಲ್ವೆ ಉದ್ಯೋಗಿಗಳಾಗಿರುವ ಅರುಣ್ ಕುಮಾರ್ ಮಹಂತ, ಮುಹಮ್ಮದ್ ಅಮೀರ್ ಖಾನ್ ಮತ್ತು ಪಪ್ಪು ಕುಮಾ‌ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳ ವಿರುದ್ಧ ಕೊಲೆಗೆ ಸಮನಾಗದ ನರಹತ್ಯೆ ಮತ್ತು ಸಾಕ್ಷ್ಯನಾಶದ ಆರೋಪ ಹೊರಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

ಮಾನವ ಪ್ರಮಾದ ಮತ್ತು ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ರೈಲ್ವೆ ಮಂಡಳಿಗೆ ವರದಿ ಸಲ್ಲಿಸಿದ್ದರು.

ಒಡಿಶಾದ ಬಹನಾಗ ಬಳಿಯ ಬಾಲಾಸೋರ್‌ನಲ್ಲಿ ನಡೆದ ಭೀಕರ ತ್ರಿವಳಿ ರೈಲು ದುರಂತವು ಸುಮಾರು 290 ಮಂದಿಯನ್ನು ಬಲಿಪಡೆದಿತ್ತು.

Join Whatsapp