ಒಡಿಶಾ ರೈಲು ದುರಂತ: ಸುಪ್ರೀಂಕೋರ್ಟ್​​​ಗೆ ಪಿಐಎಲ್​ ಸಲ್ಲಿಕೆ

Prasthutha|

- Advertisement -

ಒಡಿಶಾದ ಬಾಲಸೋರ್​ ನಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​​ ನಲ್ಲಿ ಪಿಐಎಲ್​ ಸಲ್ಲಿಕೆಯಾಗಿದೆ.

ರೈಲ್ವೆ ದುರಂತ ಸಂಬಂಧ ತನಿಖೆಗೆ ತಜ್ಞರ ಸಮಿತಿ ರಚಿಸುವಂತೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿದೆ. ಸಾರ್ವಜನಿಕರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

- Advertisement -

ಸುಪ್ರೀಂ ಕೋರ್ಟ್ ವಕೀಲ ವಿಶಾಲ್ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ರೈಲು ಪ್ರಯಾಣವನ್ನು ಶೇ.100ರಷ್ಟು ಸುರಕ್ಷಿತಗೊಳಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ.

ಒಡಿಶಾ ರೈಲು ಅಪಘಾತದಲ್ಲಿ ಇಲ್ಲಿಯವರೆಗೆ 288 ಜನರು ಸಾವನ್ನಪ್ಪಿದ್ದಾರೆ.

Join Whatsapp