Home ಜಾಲತಾಣದಿಂದ ಒಡಿಶಾ ರೈಲು ದುರಂತ: ವಾಲಿಬಾಲ್ ಕ್ರೀಡಾಪಟುಗಳು ವಿಮಾನದ ಮೂಲಕ ರಾಜ್ಯಕ್ಕೆ ಆಗಮನ

ಒಡಿಶಾ ರೈಲು ದುರಂತ: ವಾಲಿಬಾಲ್ ಕ್ರೀಡಾಪಟುಗಳು ವಿಮಾನದ ಮೂಲಕ ರಾಜ್ಯಕ್ಕೆ ಆಗಮನ

ಚಿಕ್ಕಬಳ್ಳಾಪುರ: ಒಡಿಶಾ ರೈಲು ದುರಂತ ಪ್ರಕರಣದ ಪರಿಣಾಮದ ಹಿನ್ನೆಲೆ ಪಶ್ಚಿಮ ಬಂಗಾಳ, ಒಡಿಶಾ, ಕರ್ನಾಟಕ ರೈಲು ಮಾರ್ಗ ಸಂಚಾರ ರದ್ದಾಗಿದೆ. ಇದರಿಂದಾಗಿ ಪಶ್ಚಿಮ ಬಂಗಾಳದ ಹೌರಾದಿಂದ ಬೆಂಗಳೂರಿಗೆ ಬರಲು ರೈಲು ಸಿಗದೆ ಪರದಾಡಿದ್ದ ಕ್ರೀಡಾಪಟುಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ.

ರೈಲು ಸಂಚಾರ ರದ್ದಾದ ಹಿನ್ನೆಲೆ ಕರ್ನಾಟಕ ಸರ್ಕಾರ ವಿಮಾನದ ಮೂಲಕ ಕ್ರೀಡಾಪಟುಗಳನ್ನು ರಾಜ್ಯಕ್ಕೆ ಕರೆತಂದಿದೆ. ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗಾಗಿ 16 ವರ್ಷದ ಒಳಗಿನ ಬಾಲಕರ ಹಾಗೂ ಬಾಲಕಿಯರ ತಂಡ ಸೇರಿದಂತೆ ಒಟ್ಟು 24 ಆಟಗಾರರು ಮತ್ತು 6 ಮಂದಿ ಕೋಚ್‌ಗಳು ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರಲು ರೈಲು ಸಿಗದ ಹಿನ್ನೆಲೆ ವಿಡಿಯೋ ಮೂಲಕ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದಾರೆ.

ಈ ವಿಡಿಯೋ ತಲುಪಿದ ತಕ್ಷಣ ಕಾರ್ಯಪ್ರವೃತ್ತರಾದ ಸಚಿವರು ಮತ್ತು ಅಧಿಕಾರಿಗಳು ಕ್ರೀಡಾಪಟುಗಳನ್ನು ಬೆಂಗಳೂರಿಗೆ ಕರೆತರಲು ವಿಮಾನದ ವ್ಯವಸ್ಥೆ ಮಾಡಿದ್ದರು. ಅಲ್ಲದೇ ಸೂಕ್ತ ವಸತಿ ಮತ್ತು ಊಟದ ವ್ಯವಸ್ಥೆಯನ್ನೂ ಮಾಡಿದ್ದರು. ಇದೀಗ ಇಂಡಿಗೋ ವಿಮಾನದ ಮೂಲಕ ಕ್ರೀಡಾಪಟುಗಳು ಮತ್ತು ಕೋಚ್‌ ಗಳು ಸುರಕ್ಷಿತವಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ

Join Whatsapp
Exit mobile version