ಅಧಿಕಾರಿಗಳು ಅಕ್ಷರಶಃ ದರೋಡೆಕೋರರಂತೆ ಜನರ ಲೂಟಿಗೆ ಇಳಿದಿದ್ದಾರೆ: ಕಾಂಗ್ರೆಸ್

Prasthutha|

ಬೆಂಗಳೂರು: ಬೆಂಗಳೂರಲ್ಲಿ ರಾತ್ರಿ ಗಸ್ತು ತಿರುಗುತ್ತಾ ಜನತೆಗೆ ರಕ್ಷಣೆ ನೀಡಬೇಕಾದ ಪೋಲಿಸರು ರಾತ್ರಿ ಮನೆಗೆ ನಡೆದು ಹೋಗುತ್ತಿದ್ದ ಅಮಾಯಕ ದಂಪತಿಗೆ ಬೆದರಿಸಿ ಥೇಟ್ ದರೋಡೆಕೋರರಂತೆ ವರ್ತಿಸಿ ಹಣ ವಸೂಲಿ ಮಾಡಿರುವುದು ವರದಿಯಾಗಿದೆ. ಬಹುಶಃ ರಾಜ್ಯ ರೋಲ್ಕಾಲ್ ಸರ್ಕಾರದ ಪೊಲೀಸ್ ವ್ಯವಸ್ಥೆಯ ಇಂದಿನ ಪರಿಸ್ಥಿತಿ ಅರಿಯಲು ಈ ಒಂದು ಘಟನೆ ಸಾಕಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ತನಗೂ ಇಲಾಖೆಗೂ ಸಂಬಂಧ ಇಲ್ಲದಂತೆ ವರ್ತಿಸುವ ಬೇಜವಾಬ್ದಾರಿ ಗೃಹ ಸಚಿವರ ಅಡಿಯಲ್ಲಿ ಲಕ್ಷ-ಕೋಟಿಗಳ ಲೆಕ್ಕದಲ್ಲಿ ಲಂಚ ಕೊಟ್ಟು ಆಯಕಟ್ಟಿನ ಜಾಗಕ್ಕೆ ಬಂದಿರುವ ಅಧಿಕಾರಿಗಳು ಅಕ್ಷರಶಃ ದರೋಡೆಕೋರಂತೆ ಜನರ ಲೂಟಿಗೆ ಇಳಿದಿದ್ದಾರೆ. 40% ಸರ್ಕಾರ ತನ್ನ ಕಮಿಷನ್ ಎಣಿಸಿಕೊಂಡು ಮೋದಿ ಭಜನೆ ಮಾಡುತ್ತಾ ಕಾಲಕಳೆಯುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

Join Whatsapp