ತಾಲಿಬಾನ್ ಜೊತೆ ಭಾರತ ಮಾತುಕತೆ | ಕೇಂದ್ರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಉಮರ್ ಅಬ್ದುಲ್ಲಾ ಪ್ರಶ್ನೆ!

Prasthutha|

ಶ್ರೀನಗರ : ತಾಲಿಬಾನ್ ಜೊತೆ ಭಾರತವು ಅಧಿಕೃತ ಮಾತುಕತೆ ನಡೆಸಿದ ಒಂದು ದಿನದ ನಂತರ ತಾಲಿಬಾನ್ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸಿದ್ದೀರೋ ಇಲ್ಲವೋ ಎಂದು ಸ್ಪಷ್ಟಪಡಿಸುವಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

- Advertisement -

ಒಂದೋ ತಾಲಿಬಾನ್ ಭಯೋತ್ಪಾದಕ ಸಂಘಟನೆ ಅಥವಾ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿ. ತಾಲಿಬಾನ್ ಸಂಘಟನೆಯನ್ನು ನೀವು (ಕೇಂದ್ರ ಸರ್ಕಾರ) ಹೇಗೆ ನೋಡುತ್ತಿದ್ದೀರಿ ಎಂದು ನಮಗೆ ಸ್ಪಷ್ಟಪಡಿಸಿ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರು ಮಂಗಳವಾರ ದೋಹಾದಲ್ಲಿ ಭಾರತೀಯ ಪ್ರತಿನಿಧಿಯು ತಾಲಿಬಾನ್ ನಾಯಕನನ್ನು ಭೇಟಿಯಾದ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ್ದಾರೆ.

ಕತಾರ್‌ನ ಭಾರತೀಯ ರಾಯಭಾರಿ ದೀಪಕ್ ಮಿತ್ತಲ್ ಅವರು ನಿನ್ನೆ ತಾಲಿಬಾನ್‌ನ ಹಿರಿಯ ನಾಯಕ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್‌ಜಾಯ್‌ನನ್ನು ಭೇಟಿಯಾಗಿ ಅಫ್ಘಾನಿಸ್ತಾನದ ನೆಲದಲ್ಲಿ ಭಾರತೀಯ ವಿರೋಧಿ ಚಟುವಟಿಕೆಗಳು ಮತ್ತು ಭಯೋತ್ಪಾದನೆಗೆ ಅವಕಾಶ ನೀಡಬಾರಬದೆಂದು ಸೂಚಿಸಿದ್ದರು. ಇದು ತಾಲಿಬಾನ್ ಜೊತೆ ಭಾರತ ನಡೆಸಿದ ಮೊದಲ ಅಧಿಕೃತ ಮಾತುಕತೆ ಎಂದು ವಿದೇಶಾಂಗ ಇಲಾಖೆ ಹೇಳಿತ್ತು.

Join Whatsapp