ಓಮಿಕ್ರಾನ್ ಖಿನ್ನತೆಯಿಂದ ಪತ್ನಿ, ಇಬ್ಬರು ಮಕ್ಕಳನ್ನು ಕೊಂದ ವೈದ್ಯ !

Prasthutha|

ಲಕ್ನೋ: ಓಮಿಕ್ರಾನ್ ಖಿನ್ನತೆಯಿಂದ ವೈದ್ಯನೊಬ್ಬ ತನ್ನ ಪತ್ನಿ ಹಾಗೂ ಮಕ್ಕಳನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಕಲ್ಯಾಣ್‍ ಪುರದಲ್ಲಿ ನಡೆದಿದೆ.

- Advertisement -

ಆರೋಪಿಯನ್ನು ರಾಮ ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಸುಶೀಲ್ ಸಿಂಗ್ ಎಂದು ಗುರುತಿಸಲಾಗಿದೆ.


ಈತ ತನ್ನ ಪತ್ನಿ ಚಂದ್ರಪ್ರಭ (50), ಮಗ ಶಿಖಾರ್ (20), ಪುತ್ರಿ ಖುಷಿ (16)ಯನ್ನು ಹತ್ಯೆ ಮಾಡಿದ್ದಾನೆ. ಸುದ್ದಿ ತಿಳಿದ ಅಪಾರ್ಟ್ ಮೆಂಟ್ ನ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.

- Advertisement -

ಘಟನೆ ಬಳಿಕ ಪರಾರಿಯಾಗಿರುವ ವೈದ್ಯ ಕೊರೋನಾ ಹೊಸ ರೂಪಾಂತರ ತಳಿ ಓಮಿಕ್ರಾನ್ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.

ಕೊಲೆ ಮಾಡಿರುವ ವಿಚಾರವನ್ನು ಆರೋಪಿ ತನ್ನ ಸಹೋದರನಿಗೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಆರೋಪಿಯ ಸಹೋದರ ಘಟನೆ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp