ಓಮಿನಿ‌ ವ್ಯಾನ್​ ಗೆ KSRTC ಬಸ್​ ಡಿಕ್ಕಿ; ಮೂವರು ಸ್ಥಳದಲ್ಲೇ ಮೃತ್ಯು

Prasthutha|

- Advertisement -

ದಾವಣೆಗೆರೆ: ಕೆಎಸ್​ ಆರ್​ ಟಿಸಿ ಬಸ್​ ಡಿಕ್ಕಿ ಹೊಡೆದು ಓಮಿನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ
ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ನಡೆದಿದೆ.

ಸೂರಗೊಂಡನಕೊಪ್ಪ ನಿವಾಸಿಗಳಾದ ದೇವರಾಜ್(27), ರಾಕೇಶ್(30) ಹಾಗೂ ಹರಮಘಟ್ಟ ಗ್ರಾಮದ ನಿವಾಸಿ ನಂಜುಂಡಪ್ಪ(83) ಮೃತ ದುರ್ದೈವಿಗಳು.

- Advertisement -

ಇನ್ನುಳಿದಂತೆ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp