ಮಕರ ಸಂಕ್ರಾಂತಿ ಮೇಳದಲ್ಲಿ ಕಾಲ್ತುಳಿತ| ಮಹಿಳೆ ಮೃತ್ಯು

Prasthutha|

ಕಟಕ್: ಮಕರ ಸಂಕ್ರಾಂತಿ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯೋರ್ವರು ಸಾವನ್ನಪ್ಪಿದ ದಾರುಣ ಘಟನೆ ಒಡಿಶಾದ ಕಟಕ್ ನಗರದ ಬರಂಬಾದಲ್ಲಿರುವ ಸಿಂಘನಾಥ ದೇಗುಲದಲ್ಲಿ ನಡೆದಿದೆ.

- Advertisement -

ಮಕರ ಸಂಕ್ರಾಂತಿ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದಾಗ ಉಸಿರುಗಟ್ಟಿ 54 ವರ್ಷದ ಮಹಿಳೆ ಮೃತಪಟ್ಟಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಈ ದುರ್ಘಟನೆಯಲ್ಲಿ ಮಕ್ಕಳು ಸೇರಿದಂತೆ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಕಟಕ್ ನಗರದ ಬರಂಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

Join Whatsapp